ಸುಂಜುವಾನ್ ಉಗ್ರ ದಾಳಿ ಬೆನ್ನಲ್ಲೇ ಗಡಿಯಲ್ಲಿ ಉಗ್ರರ ಒಳ ನುಸುಳುವಿಕೆ ವಿಫಲಗೊಳಿಸಿದ ಸೇನೆ!

ಸತತ 2 ಉಗ್ರ ದಾಳಿ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಇಂಡೋ-ಪಾಕ್ ಗಡಿಯಲ್ಲಿ ಭಾರತದ ಗಡಿಯೊಳಗೆ ಅಕ್ರಮವಾಗಿ ಒಳ ನುಸುಳುತ್ತಿದ್ದ ಉಗ್ರರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆ ಗುರುವಾರ ಯಶಸ್ವಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಸತತ 2 ಉಗ್ರ ದಾಳಿ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಇಂಡೋ-ಪಾಕ್ ಗಡಿಯಲ್ಲಿ ಭಾರತದ ಗಡಿಯೊಳಗೆ ಅಕ್ರಮವಾಗಿ ಒಳ ನುಸುಳುತ್ತಿದ್ದ ಉಗ್ರರನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ಸೇನೆ ಗುರುವಾರ  ಯಶಸ್ವಿಯಾಗಿದೆ. 
ಗುರುವಾರ ಬೆಳಗ್ಗೆ ಕಾಶ್ಮೀರದ ಪೂಂಛ್ ನ ಮೆಂಧಾರ್ ಸೆಕ್ಟರ್ ನಲ್ಲಿ ಭಾರತೀಯ ಸೇನೆಯ ಕಣ್ತಪ್ಪಿಸಿ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಉಗ್ರರನ್ನು ಭಾರತೀಯ ಸೇನೆಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಶಂಕಿತ  ವ್ಯಕ್ತಿಗಳು ಗಡಿಯೊಳಗೆ ನುಸುಳುತ್ತಿದ್ದಂತೆಯೇ ಅವರತ್ತ ಸೇನೆ ಗುಂಡು ಹಾರಿಸಿದ್ದು, ಈ ವೇಳೆ ಉಗ್ರರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಪರಾರಿಯಾಗಿರುವ ಉಗ್ರರಿಗಾಗಿ ಸಿಆರ್ ಪಿಎಫ್ ಯೋಧರು ತೀವ್ರ  ಶೋಧ ನಡೆಸುತ್ತಿದ್ದು, ಅಂತೆಯೇ ಇದಕ್ಕೂ ಮೊದಲು ಉಗ್ರರು ಭಾರತದೊಳಗೆ ನುಸುಳಿರುವ ಶಂಕೆ ಮೇರೆಗೆ ಶೋಧ ತೀವ್ರ ಗೊಳಿಸಲಾಗಿದೆ.
ಇನ್ನು ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ 2 ಪ್ರತ್ಯೇಕ ಉಗ್ರ ದಾಳಿಗಳಲ್ಲಿ ಸೈನಿಕರು, ಸಾರ್ವಜನಿಕರು ಹಾಗೂ ಉಗ್ರರು ಸೇರಿದಂತೆ ಒಟ್ಟು 12 ಮಂದಿ ಸಾವಿಗೀಡಾಗಿದ್ದರು. ಸುಂಜುವಾನ್ ಸೇನಾ ಶಿಬಿರದ ಮೇಲೆ ನಡೆದ ದಾಳಿಯಲ್ಲಿ  ಸೈನಿಕರು ಸೇರಿದಂತೆ ಒಟ್ಟು 7 ಮಂದಿ ಸಾವಿಗೀಡಾಗಿದ್ದರೆ, ಇಲ್ಲಿ ಮೂವರು ಉಗ್ರರನ್ನು ಕೊಂದು ಹಾಕಲಾಗಿತ್ತು. ಅಂತೆಯೇ ಕರಣ್ ನಗರದಲ್ಲಿ ನಡೆದ ಉಗ್ರ ದಾಳಿಯಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯಲಾಗಿತ್ತು. ಈ ಎರಡು  ದಾಳಿಗಳ ಬಳಿಕ ಗಡಿಯಲ್ಲಿ ಕಟ್ಟೆಚ್ಚರದಿಂದ ಇರುವಂತೆ ಸೈನಿಕರಿಗೆ ಭಾರತೀಯ ಸೇನೆಯ ಅಧಿಕಾರಿಗಳು ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com