ನಿನ್ನೆ ಪ್ರೇಮಿಗಳ ದಿನವಾಗಿದ್ದು, ಅಂತೆಯೇ ಅರವಿಂದ್ ಕೇಜ್ರಿವಾಲ್ ನೇತೃತ್ವ ದೆಹಲಿ ಸರ್ಕಾರ 3 ವರ್ಷ ಪೂರ್ಣಗೊಳಿಸಿದೆ. ಈ ನಿಟ್ಟಿನಲ್ಲಿ ನಿನ್ನೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಾಮಾಜಿಕ ಜಾಲತಾಣ ಮತ್ತು ಫೋನ್ ಇನ್ ಮೂಲಕ ಸಾರ್ವಜನಿಕರಿಂದ ಪ್ರಶ್ನೆಗಳನ್ನು ಆಹ್ವಾನಿಸಿದ್ದು, ಈ ವೇಳೆ ಸಾವಿರಾರು ಮಂದಿ ದೆಹಲಿ ಸಿಎಂಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಜ್ರಿವಾಲ್, 'ದ್ವೇಷವನ್ನು ಪ್ರೀತಿಯಿಂದ ಮಾತ್ರ ಸೋಲಿಸಲು ಸಾಧ್ಯ' ಎಂದು ಹೇಳಿದ್ದಾರೆ.