ವ್ಯಕ್ತಿಯ ಸಂಬಂಧಿಯೊಬ್ಬರು ಮಾತನಾಡಿ, ಅಂತಿಮ ಸಂಸ್ಕಾರ ನಡೆಸಲು ಯಾರೊಬ್ಬರೂ ಸಹಾಯ ಮಾಡಲಿಲ್ಲ. ನಾನು ಕಡು ಬಡವರಾಗಿದ್ದು, ಮೃತದೇಹವನ್ನು ಗ್ರಾಮಕ್ಕೆ ತೆಗೆದುಕೊಂಡು ಹೋಗಿ, ಅಂತಿಮ ಸಂಸ್ಕಾರ ನಡೆಸಲು ನಮ್ಮ ಬಳಿ ಹಣವಿರಲಿಲ್ಲ. ಸಹಾಯಕ್ಕಾಗಿ ಪರದಾಡುತ್ತಿದ್ದ ವೇಳೆ ಆಸ್ಪತ್ರೆಯಲ್ಲಿದ್ದ ಕೆಲವರು ಮೃತದೇಹವನ್ನು ದಾನ ಮಾಡುವಂತೆ ತಿಳಿಸಿದರು. ಹೀಗಾಗಿ ಮೃತದೇಹವನ್ನು ದಾನ ಮಾಡಿದ್ದೇವೆಂದು ಹೇಳಿದ್ದಾರೆ.