ನವದೆಹಲಿ: ಮುಂಬೈಯಲ್ಲಿನ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿನ 11.300 ಕೋಟಿ ರೂ. ಹಗರಣ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ಕೆಸರೆರಾಟಕ್ಕೂ ಕಾರಣವಾಗಿದೆ.
ಯುಪಿಎ ಸರ್ಕಾರದ ಅವಧಿಯಲ್ಲೂ ಈ ಹಗರಣ ನಡೆದಿತ್ತು ಎಂದು ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಆರೋಪಿಸಿದ್ದಾರೆ.
ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಹಗರಣ ಸಂಬಂಧ ಪ್ರತಿಪಕ್ಷಗಳು ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ ಎಂದು ಅವರು ಅಪಾದಿಸಿದರು.ವಿದೇಶದಲ್ಲಿ ತಲೆಮರೆಸಿಕೊಂಡಿರುವ ಈ ಹಗರಣದ ಪ್ರಮುಖ ಆರೋಪಿ ನೀರವ್ ಮೋದಿ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ನೀರವ್ ಮೋದಿ ದೇಶದಿಂದ ಪಲಾಯನ ಮಾಡಲು ಸರ್ಕಾರ ನೆರವು ನೀಡಿಲ್ಲ. ಶೀಘ್ರದಲ್ಲಿಯೇ ಆತನನ್ನು ಬಂಧಿಸಿ ದೇಶಕ್ಕೆ ಕರೆತರಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement