ದೆಹಲಿ: ವಿದ್ಯಾರ್ಥಿನಿ ಎದುರು ಹಸ್ತಮೈಥುನ; ಆರೋಪಿ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ

ದೆಹಲಿ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿ ಪಕ್ಕ ಬಸ್ಸಿನಲ್ಲಿ ಕೂತು ಆಕೆಯ ಮುಂದೆ ಹಸ್ತಮೈಥುನ ಮಾಡಿದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂ. ಇನಾಮು ...
ಕಿರುಕುಳ ನೀಡಿದ ವ್ಯಕ್ತಿ
ಕಿರುಕುಳ ನೀಡಿದ ವ್ಯಕ್ತಿ
Updated on
ದೆಹಲಿ: ದೆಹಲಿ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿ ಪಕ್ಕ ಬಸ್ಸಿನಲ್ಲಿ ಕೂತು ಆಕೆಯ ಮುಂದೆ ಹಸ್ತಮೈಥುನ ಮಾಡಿದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂ. ಇನಾಮು ಕೊಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ. 
ಹುಡುಗಿಯ ಎದುರು ಬಸ್ಸಿನಲ್ಲಿ ಹಸ್ತ ಮೈಥುನ ಮಾಡಿಕೊಂಡ ವ್ಯಕ್ತಿಯ ವಿರುದ್ಧ ದಿಲ್ಲಿಯ ವಸಂತ ವಿಹಾರ್‌ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿ ವ್ಯಕ್ತಿಯ ಬಗ್ಗೆ ಮಾಹಿತಿ ಇರುವವರು ತಮ್ಮ ಸಮೀಪದ ಪೊಲೀಸ್‌ ಠಾಣೆಗೆ ತಿಳಿಸುವಂತೆ ಹೇಳಲಾಗಿದೆ.
ಆರೋಪಿಯ ಬಗ್ಗೆ ಮಾಹಿತಿ ನೀಡುವವರ ಗುರುತು ವಿವರಗಳನ್ನು ರಹಸ್ಯವಾಗಿಡಲಾಗುವುದು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 
ದೆಹಲಿಯ ಜನದಟ್ಟನೆಯ ಬಸ್ಸಿನಲ್ಲಿ  ಆರೋಪಿ ವಿಕೃತ ಕಾಮಿಯು ನಡೆಸಿದ್ದ ಕೃತ್ಯಗಳನ್ನು ಸಂತ್ರಸ್ತೆ  ತನ್ನ ಮೊಬೈಲ್‌ ಕ್ಯಾಮೆರಾದಲ್ಲಿ ದಾಖಲಿಸಿಕೊಂಡಿದ್ದಳು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com