ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಪ್ರಕರಣ ಸಂಬಂಧ ಬ್ಯಾಂಕ್'ನ ಮಾಜಿ ಡಿಜಿಎಂ ಗೋಕುಲ್ ನಾಥ್ ಶೆಟ್ಟಿಯ ಮಲಾಡ್ ನಲ್ಲಿರುವ ಮನೆಗೆ ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆ ಗೋಕುಲ್ ಅವರು ಅಧಿಕಾರಿಗಳಿಗೆ ಸಿಕ್ಕಿರಲಿಲ್ಲ. ದಾಳಿ ಸಂದರ್ಭ ಜಾರಿ ನಿರ್ದೇಶನಾಲಯವು ರೂ.5,100 ಕೋಟಿ ಮೌಲ್ಯದ ಚಿನ್ನ ಹಾಗೂ ವಜ್ರಗಳನ್ನು ವಶಪಡಿಸಿಕೊಂಡಿತ್ತು. ಪ್ರಕರಣ ವಿಚಾರಣೆಗಳು ಹಾಗೂ ತನಿಖೆಗಳು ಮುಂದುವರೆದಿವೆ ಎಂದು ಮೂಲಗಳು ಮಾಹಿತಿ ನೀಡಿವೆ.