ತಮಿಳುನಾಡಿಗೆ ನೀರಿನ ಹಂಚಿಕೆ ಪ್ರಮಾಣವನ್ನು ಕಡಿತಗೊಳಿಸಿ ನೀಡಿರುವ ಸುಪ್ರೀಂ ತೀರ್ಪು, ತಮಿಳುನಾಡಿನ ರೈತರ ಜೀವನದ ಮೇಲೆ ಪರಿಣಮ ಬೀರುತ್ತದೆ ಎಂದು ಹೇಳಿರುವ ರಜನಿ, ತಾವು ಶೀಘ್ರವೇ ರಾಜಕೀಯ ಪ್ರವೇಶಿಸಲಿದ್ದು, ಅಲ್ಲಿಯವರೆಗೂ ರಾಜ್ಯ ಸರ್ಕಾರ ಕ್ರಮ ಕೈಗೊಂಡು ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು ಟ್ವಿಟ್ ನಲ್ಲಿ ಬರೆದಿದ್ದಾರೆ.