ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐನಿಂದ ಲುಕ್ ಔಟ್ ನೋಟಿಸ್ ಪಡೆದಿರುವ ನೀರವ್ ಮೋದಿ ಮಕಾವ್ ಮತ್ತು ಕೌಲಾಲಂಪುರದಲ್ಲಿ ಎರಡು ಆಭರಣ ಶೋರೂಂಗಳನ್ನು ತೆರೆದಿದ್ದಾರೆ. ಇನ್ನು ಈ ಶೋರೂಂಗಳಿಗೆ ಹೂಡಿಕೆ ಮಾಡಿರುವ ಬಂಡವಾಳ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣದಲ್ಲಿ ಪಡೆದ ಹಣವೇ ಅಥವೇ ಬೇರೆ ಆದಾಯದ ಮೂಲದ್ದೇ ಎಂಬ ಹಲವು ಪ್ರಶ್ನೆಗಳು ಉದ್ಭವವಾಗುತ್ತಿದ್ದು, ಈ ಬಗ್ಗೆಯೂ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.