ಪಿಎನ್ ಬಿ ವಂಚನೆ ಪ್ರಕರಣ: ಭಾರತದಲ್ಲಿ ತನಿಖೆ, ಮಲೇಷ್ಯಾದಲ್ಲಿ ಮತ್ತೊಂದು ಆಭರಣ ಶೋರೂಂ ತೆರೆದ ನೀರವ್ ಮೋದಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ ಅತ್ತ ಮಲೇಷ್ಯಾದಲ್ಲಿ ಮತ್ತೆರಡು ಶೋರೂಂಗಳನ್ನು ತೆರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ ಅತ್ತ ಮಲೇಷ್ಯಾದಲ್ಲಿ ಮತ್ತೆರಡು ಶೋರೂಂಗಳನ್ನು ತೆರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣ ಸಂಬಂಧ ಸಿಬಿಐನಿಂದ ಲುಕ್ ಔಟ್ ನೋಟಿಸ್ ಪಡೆದಿರುವ ನೀರವ್ ಮೋದಿ ಮಕಾವ್ ಮತ್ತು ಕೌಲಾಲಂಪುರದಲ್ಲಿ ಎರಡು ಆಭರಣ ಶೋರೂಂಗಳನ್ನು ತೆರೆದಿದ್ದಾರೆ. ಇನ್ನು ಈ  ಶೋರೂಂಗಳಿಗೆ ಹೂಡಿಕೆ ಮಾಡಿರುವ ಬಂಡವಾಳ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣದಲ್ಲಿ ಪಡೆದ ಹಣವೇ ಅಥವೇ ಬೇರೆ ಆದಾಯದ ಮೂಲದ್ದೇ ಎಂಬ ಹಲವು ಪ್ರಶ್ನೆಗಳು ಉದ್ಭವವಾಗುತ್ತಿದ್ದು, ಈ ಬಗ್ಗೆಯೂ  ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇನ್ನು ಪ್ರಸ್ತುತ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com