ಅಗರ್ತಲಾ ವಿಮಾನನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ವೇಳೆಯಲ್ಲಿ ಸಿಐಎಸ್ಎಫ್ ಸಿಬ್ಬಂದಿಗಳು ಪ್ರಯಾಣಿಕನು ತನ್ನೊಡನೆ ಚಿನ್ನದ ಗಟ್ಟಿಗಳನ್ನು ಸಾಗಿಸುತ್ತಿದ್ದಾನೆ ಎನ್ನುವುದನ್ನು ಪತ್ತೆ ಮಾಡಿದೆ. ಅಗರ್ತಲಾದಿಂದ ಕೊಲ್ಕತ್ತಾಗೆ ಇಂಡಿಗೊ ವಿಮಾನದಲ್ಲಿ ಪ್ರಯಾಣ ಬೆಳೆಸಬೇಕಾಗಿದ್ದ ಅಬುಲ್ ಕಲಾಮ್ ಆಜಾದ್ ಈ ಕೃತ್ಯ ಎಸಗಿದ್ದಾನೆಂದು ಅಧಿಕಾರಿಗಳು ಹೇಳಿದ್ದಾರೆ. ಇದೇ ವೇಳೆ ಸಂಪೂರ್ಣ ತಪಾಸಣೆಗಾಗಿ ಆರೋಪಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ಯಲಾಯಿತು.