ಭಾನುವಾರ ನಟ ಕಮಲ್ ಹಾಸನ್ ಅವರು ನಟ ರಜನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿ ಸುಮಾರು 1 ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದರು. ಚೆನ್ನೈನ ಪೋಯಸ್ ಗಾರ್ಡನ್ ನಿವಾಸಕ್ಕೆ ಇಂದು ಆಗಮಿಸಿದ್ದ ನಟ ಕಮಲ್ ಹಾಸನ್ ಅವರು, ಸುಮಾರು ವಿಚಾರಗಳು ಕುರಿತು ಚರ್ಚೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ರಜನಿಕಾಂತ್ ಕಮಲ್ ಹಾಸನ್ ಹಣ, ಹೆಸರು ಗಳಿಸಲು ರಾಜಕೀಯಕ್ಕೆ ಬಂದಿಲ್ಲ. ಪ್ರಾಮಾಣಿಕವಾಗಿ ಅವರು ಜನಸೇವೆ ಮಾಡಬೇಕು ಎಂದು ಬಯಸಿದ್ದಾರೆ. ಅವರ ರಾಜಕೀಯ ಭವಿಷ್ಯ ಉಜ್ವಲವಾಗಿರಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದರು.