ಭಯೋತ್ಪಾದಕರು ಹಾಗೂ ಸೇನಾ ಸಿಬ್ಬಂದಿಗಳ ನಡುವಿನ ಗುಂಡಿನ ಕಾಳಗದಲ್ಲಿ 3 ಯೋಧರಿಗೆ ಗಾಯಗಳುಂಟಾಗಿದ್ದು, ಇಬ್ಬರು ಭಯೋತ್ಪಾದಕರಿಗೂ ಗಾಯಗಳುಂಟಾಗಿದೆ. ಜಮ್ಮುವಿನ ಕರ್ನಲ್ ದೇವೇಂದರ್ ಆನಂದ್ ಈ ಬಗ್ಗೆ ಮಾಹಿತಿ ನೀಡಿದ್ದು, ಪಾಕಿಸ್ತಾನದ ಸೇನೆ ಸಣ್ಣ ಶಸ್ತ್ರಾಸ್ತ್ರಗಳ ಮೂಲಕ ದಾಳಿ ನಡೆಸಲು ಮುಂದಾಯಿತು, ಅದೇ ಮಾದರಿಯ ಶಸ್ತ್ರಾಸ್ತ್ರಗಳಿಂದ ಭಾರತೀಯ ಸೇನೆ ಸಹ ಪಾಕ್ ಗೆ ಪ್ರತ್ಯುತ್ತರ ನೀಡಿದ್ದು ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದು ಗುಂಡಿನ ದಾಳಿಯಲ್ಲಿ ಗಾಯಗೊಂಡ ಯೋಧನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.