ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಕಳೆದ ಗುರುವಾರ ಮುಂಬೈನ ಲೀಲಾವತಿ ಆಸ್ಪತ್ರೆಗೆ ಆಗಮಿಸಿದ್ದರು. ಇದನ್ನೇ ಕೇಂದ್ರವಾಗಿರಿಸಿಕೊಂಡು ಕೆಲ ಮಾಧ್ಯಮಗಳು ಪರಿಕ್ಕರ್ ಅವರುನಾಲ್ಕನೇ ಹಂತದ ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ವರದಿ ಮಾಡಿದ್ದವು. ಇದೀಗ ಈ ಎಲ್ಲ ಊಹೋಪೋಹಗಳಿಗೆ ಮುಂಬೈನ ಲೀಲಾವತಿ ಆಸ್ಪತ್ರೆ ಆಡಳಿತ ಮಂಡಳಿ ತೆರೆ ಎಳೆದಿದ್ದು, ಪರಿಕ್ಕರ್ ಆರೋಗ್ಯವಾಗಿದ್ದು, ಸಾಮಾನ್ಯ ಚೆಕ್ ಅಪ್ ಗಾಗಿ ಆಸ್ಪತ್ರೆ ಆಗಮಿಸಿದ್ದಾರೆ. ಅವರು ಆರೋಗ್ಯವಾಗಿದ್ದು, ಚಿಕಿತ್ಸೆ ಉತ್ತಮವಾದಿ ಸ್ಪಂದಿಸುತ್ತಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.