ಭಾರತದ ವಿವಿಧ ಬ್ಯಾಂಕ್ ಗಳಿಂದ ಸುಮಾರು 9 ಸಾವಿರ ಕೋಟಿ ರೂ. ಸಾಲ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯ ಲಂಡನ್ ನಲ್ಲಿ ತಲೆ ಮರೆಸಿಕೊಂಡಿದ್ದು, ಹಾವಲಾ ದಂಧೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಲಲಿತ್ ಮೋದಿ ದೇಶ ಬಿಟ್ಟಿದ್ದಾರೆ. ಈ ಇಬ್ಬರೂ ಆರೋಪಿಗಳ ಬಂಧನಕ್ಕೆ ಸಿಬಿಐ ಅವಿರತ ಪ್ರಯತ್ನ ಮಾಡುತ್ತಿದ್ದು, ಈ ಸಂಬಂಧ ಇಂಟರ್ ಪೋಲ್ ನೆರವು ಕೂಡ ಕೇಳಿದೆ, ಮಾರ್ಚ್ 2016ರಿಂದ ಮಲ್ಯ ದೇಶ ಬಿಟ್ಟು ಪರಾರಿಯಾಗಿ ಲಂಡನ್ ನಲ್ಲಿ ವಾಸ್ತವ್ಯ ಹೂಡಿದ್ದು, ಲಲಿತ್ ಮೋದಿ ಕೂಡ ದೇಶ ಬಿಟ್ಟಿದ್ದಾರೆ.