ಬ್ಯಾಂಕುಗಳಿಗೆ ಸಂಬಂಧಸಿದ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ಅಧಿಕಾರ ಹೊಂದಿರುವ ಬ್ಯಾಂಕುಗಳ ಮಂಡಳಿ ವಿಸರ್ಜನೆ ಮಾಡುವ ಕುರಿತು ಕೇಂದ್ರ ಸರ್ಕಾರ ಚಿಂತನೆಯಲ್ಲಿ ತೊಡಗಿದ್ದು, ಪ್ರಸ್ತುತ ಈ ಮಂಡಳಿಗೆ ವಿನೋದ್ ರಾಯ್ ಅವರು ಮುಖ್ಯಸ್ಥರಾಗಿದ್ದಾರೆ. ಇದೇ ಮಾರ್ಚ್ ನಲ್ಲಿ ವಿನೋದ್ ರಾಯ್ ಅವರು ನಿವೃತ್ತರಾಗಲಿದ್ದು, ಇವರ ನಿವೃತ್ತಿ ಬಳಿಕ ಮಂಡಳಿಯನ್ನು ವಿಸರ್ಜನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದೇ ಕಾರಣಕ್ಕೆ ಈ ವರೆಗೂ ಮಂಡಳಿದೆ ಮುಂದಿನ ಮುಖ್ಯಸ್ಥರನ್ನು ನೇಮಕ ಮಾಡಿಲ್ಲ ಎನ್ನಲಾಗಿದೆ.