ದೆಹಲಿ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ: ಇಬ್ಬರು ಎಎಪಿ ಶಾಸಕರಿಗೆ ನ್ಯಾಯಾಂಗ ಬಂಧನ

ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ್ದ ಎಎಪಿ ಶಾಸಕರನ್ನು ಗುರುವಾರದ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ದೆಹಲಿ ಮುಖ್ಯ ಕಾರ್ಯದರ್ಶಿಗಳ ಮೇಲೆ ಹಲ್ಲೆ: ಎಎಪಿ ಶಾಸಕರಿಗೆ ನ್ಯಾಯಾಂಗ ಬಂಧನ
ದೆಹಲಿ ಮುಖ್ಯ ಕಾರ್ಯದರ್ಶಿಗಳ ಮೇಲೆ ಹಲ್ಲೆ: ಎಎಪಿ ಶಾಸಕರಿಗೆ ನ್ಯಾಯಾಂಗ ಬಂಧನ
Updated on
ನವದೆಹಲಿ: ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ್ದ ಎಎಪಿ ಶಾಸಕರನ್ನು ಗುರುವಾರದವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಶಾಸಕರಾದ ಪ್ರಕಾಶ್ ಜರ್ವಾಲ್ ಮತ್ತು ಅಮಾನತುಲ್ಲಾ ಖಾನ್ ನ್ಯಾಯಾಂಗ ಬಂಧನಕ್ಕೆ  ಒಳಗಾಗಿದ್ದಾರೆ.
ಮುಖ್ಯ ಕಾರ್ಯದರ್ಶಿ ಪ್ರಕಾಶ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಶಾಸಕರನ್ನು ದೆಹಲಿ ಪೋಲೀಸರು ಇಂದು ಮುಂಜಾನೆ ಬಂಧಿಸಿದ್ದರು. 
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದಲ್ಲಿ ಮಂಗಳವಾರದಂದು ನಡೆದ ಸಭೆಯಲ್ಲಿ ಎಎಪಿ ಶಾಸಕರು ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ಕುರಿತಂತೆ ಅಂಶು ಪ್ರಕಾಶ್ ಪೋಲೀಸ್ ಅಧಿಕಾರಿಗಳಿಗೆ ವಿವರವಾದ ಪತ್ರ ಬರೆದು ದೂರು ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com