ನವದೆಹಲಿ: ದೆಹಲಿ ಮುಖ್ಯ ಕಾರ್ಯದರ್ಶಿ ಅನ್ಸು ಪ್ರಕಾಶ್ ಮೇಲೆ ಎ ಎಪಿ ಶಾಸಕ ಅಮಾನತುಲ್ಲಾ ಖಾನ್ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಶಾಸಕರನ್ನು ಬಂಧಿಸಲಾಗಿದೆ. ಖಾನ್ ಅವರು ತಾನು ಜಾಮಿಯಾ ನಗರ ಪೋಲೀಸ್ ಠಾಣೆಗೆ ಬಂದು ಶರಣಾಗಿದ್ದು ಅವರನ್ನು ಪೋಲೀಸರು ಬಂಧಿಸಿದ್ದಾರೆ. ಈ ವೇಳೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಶಾಸಕ ಖಾನ್ ಹೇಳಿಕೆ ನೀಡಿದ್ದಾರೆ.