ತಂಗ್ಧಾರ್ ಪ್ರದೇಶದ ಕರ್ನಾಪ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಮುರ್ಮು ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಸಂಜೆ 4.30ರ ಸುಮಾರಿಗೆ ಪಾಕಿಸ್ತಾನ ಸೇನೆ ಇದ್ದಕ್ಕಿದ್ದಂತೆ ಅಪ್ರಚೋದಿತ ಗುಂಡಿನ ದಾಳಿ ನಡೆಸಲು ಆರಂಭಿಸಿತ್ತು. ಪರಿಣಾಮ ಮುರ್ಮು ಅವರ ಹೊಟ್ಟೆಗೆ ಗುಂಡು ತಗುಲಿತ್ತು. ಬಳಿಕ ಮುರ್ಮು ಅವರನ್ನು ಹೆಲಿಕಾಪ್ಟರ್ ಮೂಲಕ ಶ್ರೀನಗರಕ್ಕೆ ಕರೆದೊಯ್ಯಲಾಗಿತ್ತು ಎಂದಿದ್ದಾರೆ.