ನನ್ನ ಅಭಿಪ್ರಾಯದಂತೆ ಈಶಾನ್ಯ ವಲಯದ ನೆರೆ ದೇಶ ತುಂಬಾ ಚಾಣಾಕ್ಷವಾಗಿ ಗೇಮ್ ಪ್ಲೇ ಮಾಡುತ್ತಿದ್ದು, ಗಡಿಯನ್ನು ಸದಾ ಕಾಲ ಅಶಾಂತಿಯಿಂದ ಇರಿಸಲು ಸದಾ ಪ್ರಯತ್ನಿಸುತ್ತಿದ್ದು, ಅಕ್ರಮ ವಲಸಿಗರನ್ನು ಚಾಣಾಕ್ಷವಾಗಿ ದೇಶದೊಳಗೆ ನುಗ್ಗಿಸಿ ಗಡಿ ಅಶಾಂತಿಗೆ ಕಾರಣವಾಗುತ್ತಿದೆ. ಈಶಾನ್ಯ ಗಡಿಯಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದ್ದು, ರಾಜ್ಯದಲ್ಲಿ ಹೊರಗಿನವರು ಅಕ್ರಮವಾಗಿ ನೆಲೆಸಿದ್ದಾರೆ. ಎಐಯುಡಿಎಫ್ ಎಂಬ ಪಕ್ಷ ಅಥವಾ ಸಂಘಟನೆ ಇಂತಹ ಅಕ್ರಮ ವಲಸಿಗರ ನೆರವಿಗೆ ನಿಂತಿದ್ದು, ಈ ಪಕ್ಷದ ಕುರಿತು ನೀವು ಸೂಕ್ಷ್ಮವಾಗಿ ಗಮನಿಸಿದರೆ, 1980ರಲ್ಲಿ ಬಿಜೆಪಿ ಬೆಳೆದ ವೇಗಕ್ಕಿಂತಲೂ ಈ ಪಕ್ಷ ಹೆಚ್ಚು ವೇಗವಾಗಿ ಬೆಳೆಯುತ್ತಿದೆ ಎಂದು ಬಿಪಿನ್ ರಾವತ್ ಹೇಳಿದ್ದಾರೆ.