ಈ ಬಗ್ಗೆ ವರದಿಯೊಂದನ್ನು ಬಿಡುಗಡೆ ಮಾಡಿರುವ ಅಮ್ನೆಸ್ಟಿ ಇಂಟರ್ನ್ಯಾಷನಲ್ ಸಂಸ್ಥೆ, ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ಅನಗತ್ಯ ಭೀತಿ ಹುಟ್ಟಿಸುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಹೇಳಿದೆ. ಅಲ್ಲದೆ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲು ಭಾರತೀಯ ಅಧಿಕಾರಿಗಳು ಕಾನೂನನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದು, ಪತ್ರಕರ್ತರಿಗೂ ಬೆದರಿಕೆ ಒಡ್ಡುತ್ತಿದ್ದಾರೆ. ದಕ್ಷಿಣ ಏಷ್ಯಾದಲ್ಲಿ ಮಾನವಹಕ್ಕುಗಳ ಸ್ಥಿತಿಗತಿ ತೀರಾ ಶೋಚನೀಯವಾಗಿದ್ದು, ಭಾರತದಲ್ಲಿ ಗೋಮಾಂಸ ಭಕ್ಷಣೆ ನೆಪದಲ್ಲಿ ಗೋರಕ್ಷಕರಿಂದ ಹಲ್ಲೆ ಮತ್ತು ಹತ್ಯೆ ಘಟನೆಗಳು ಹೆಚ್ಚುತ್ತಿವೆ ಎಂದು ಸಂಸ್ಥೆಯ ಇತ್ತೀಚಿನ ವರದಿಯಲ್ಲಿ ವಿವರಿಸಲಾಗಿದೆ.