ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ನಿರಂತರ ಪುಂಡಾಟಿಕೆ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತೀಕ್ಷ್ಣ ಪ್ರತ್ಯುತ್ತರ ನೀಡಿದೆ.
ಜಮ್ಮು ಮತ್ತು ಕಾಶ್ಮೀರದ ತಂಗ್ದಾರ್ ಸೆಕ್ಟರ್ ಬಳಿ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಂ ದಾಳಿಗೆ ಮುಂದಾಗಿತ್ತು ಈ ವೇಳೆ ಎಚ್ಚೆತ ಬಾರತೀಯ ಸೇನೆ ಬಿಎಟಿ ದಾಳಿಯನ್ನು ವಿಫಲಗೊಳಿಸಿರುವುದಾಗಿ ಹೇಳಿದೆ.
ಕಳೆದ ರಾತ್ರಿ ನಡೆದ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಟಿಗೆ ಭಾರತೀಯ ಸೇನೆ ಯೋಧರು ತೀಕ್ಷ್ಣ ಪ್ರತ್ಯುತ್ತರ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.