ದೆಹಲಿ ಕೋರ್ಟ್ ಗೆ ರೊಟೊಮ್ಯಾಕ್‌ ಮಾಲೀಕ ವಿಕ್ರಮ್‌ ಕೊಠಾರಿ ಹಾಜರುಪಡಿಸಿದ ಸಿಬಿಐ

ವಿವಿಧ ಬ್ಯಾಂಕುಗಳಿಗೆ 3,695 ಕೋಟಿ ರುಪಾಯಿ ವಂಚಿಸಿದ ಆರೋಪದ ಮೇಲೆ ನಿನ್ನೆ ಬಂಧನಕ್ಕೊಳಗಾಗಿರುವ...
ವಿಕ್ರಮ್ ಕೊಠಾರಿ
ವಿಕ್ರಮ್ ಕೊಠಾರಿ
Updated on
ನವದೆಹಲಿ: ವಿವಿಧ ಬ್ಯಾಂಕುಗಳಿಗೆ 3,695 ಕೋಟಿ ರುಪಾಯಿ ವಂಚಿಸಿದ ಆರೋಪದ ಮೇಲೆ ನಿನ್ನೆ ಬಂಧನಕ್ಕೊಳಗಾಗಿರುವ ರೊಟೊಮ್ಯಾಕ್‌ ಪೆನ್‌ ಕಂಪನಿಯ ಮಾಲೀಕ ವಿಕ್ರಮ್‌ ಕೊಠಾರಿ ಹಾಗೂ ಪುತ್ರ ರಾಹುಲ್‌ ನನ್ನು ಸಿಬಿಐ ಶುಕ್ರವಾರ ದೆಹಲಿ ಕೋರ್ಟ್ ಗೆ ಹಾಜರುಪಡಿಸಿದೆ. 
ಸಿಬಿಐ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಇಂದು ಹೆಚ್ಚುವರಿ ಚೀಫ್ ಮೆಟ್ರೋಪೊಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರ ಮುಂದೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಆರೋಪಿಗಳ ಪರ ವಕೀಲ ಪ್ರಮೋದ್ ಕುಮಾರ್ ದುಬೇ ಅವರು ಸಿಬಿಐ ವಾದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಆರೋಪಿಗಳನ್ನು ಸೆಷನ್ಸ್ ಕೋರ್ಟ್ ಹಾಜರುಪಡಿಸುವ ಬದಲು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಿರುವ ಸಿಬಿಐ ನಿರ್ಧಾರ ಸರಿಯಿಲ್ಲ ಎಂದಿದ್ದಾರೆ.
ವಾದ ಪ್ರತಿ ವಾದ ಆಲಿಸಿದ ಕೋರ್ಟ್ ತೀರ್ಪನ್ನು ಮಧ್ಯಾಹ್ನ ಕಾಯ್ದಿರಿಸಿದೆ.
ಸಾಲ ನೀಡಿದ ಏಳು ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್‌ ಆಫ್‌ ಬರೋಡಾ ರೊಟಮ್ಯಾಕ್ ವಂಚನೆಯ ಬಗ್ಗೆ ಸಿಬಿಐಗೆ ಭಾನುವಾರ ದೂರು ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com