ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಅವರು, ಸ್ವತಃ ವಿದೇಶದಲ್ಲಿ ಕಪ್ಪು ಹಣ ಇಟ್ಟಿರುವ ಮುಖ್ಯಮಂತ್ರಿಯಿಂದ ಏನನ್ನು ನಿರೀಕ್ಷಿಸಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. ಇಡೀ ಕುಟುಂಬವೇ ಹಗರಣದಲ್ಲಿ ಸಿಲುಕಿದೆ ಎಂದು ಆರೋಪಿಸಿರುವ ಅವರು, ಇದು ಅಚ್ಚರಿಯ ಬೆಳವಣಿಗೆಯಲ್ಲ. ಕಾಂಗ್ರೆಸ್ನ ಹವ್ಯಾಸ ಎಂದು ಕಿಡಿಕಾರಿದ್ದಾರೆ.