ಇನ್ನು ಇತ್ತೀಚೆಗೆ ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ತನ್ನ ಅಂತಿಮ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಕರ್ನಾಟಕಕ್ಕೆ 14.75 ಟಿಎಂಸಿ ಹೆಚ್ಚುವರಿ ನೀರನ್ನು ನೀಡಿತ್ತು. ಅಂತೆಯೇ ಬೆಂಗಳೂರಿಗಾಗಿ 4.5 ಟಿಎಂಸಿ ನೀರನ್ನು ಮೀಸಲಿಟ್ಟು ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡುವಂತೆಯೂ ಮತ್ತು ಕೇರಳ ಮತ್ತು ಪಾಂಡಿಚೇರಿಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿತ್ತು. ಅಲ್ಲದೆ ಇನ್ನು 6 ವಾರಗಳೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದಲ್ಲದೆ, ಮತ್ತೆ ಕಾಲಾವಕಾಶ ಕೇಳದಂತೆ ಸೂಚನೆ ನೀಡಿತ್ತು.