ಪಣಜಿ: ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ದಶಕಗಳಿಂದ ಇತ್ಯರ್ಥವಾಗದ ಮಹದಾಯಿ ವಿವಾದ ಬಗೆಹರಿಸುವುದಾಗಿ ಹೇಳಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಮಿತ್ರ ಪಕ್ಷ ಶಿವಸೇನೆ ವಾಗ್ದಾಳಿ ನಡೆಸಿದ್ದು, ಬಿಜೆಪಿ ಅಧ್ಯಕ್ಷರು ಕಾಂಗರೂ ಕೋರ್ಟ್(ನೀತಿ ನಿಯಮಗಳನ್ನು ಗಾಳಿಗೆ ತೂರಿ ತಮಗೆ ಬೇಕಾದಂತೆ ವಿಚಾರಣೆ ಮಾಡುವುದು)ನಂತೆ ವರ್ತಿಸುತ್ತಿದ್ದಾರೆ ಎಂದು ಮಂಗಳವಾರ ಕಿಡಿಕಾರಿದೆ.