ಹಲ್ಲೆ ನಡೆಸುವುದಿಲ್ಲ ಎಂಬ ಭರವಸೆ ನೀಡಿದರೆ ಸಭೆಗಳಿಗೆ ಹಾಜರಾಗುತ್ತೇವೆ: ಕೇಜ್ರಿವಾಲ್ ಗೆ ದೆಹಲಿ ಮುಖ್ಯಕಾರ್ಯದರ್ಶಿ ಪತ್ರ

ಹಲ್ಲೆ ನಡೆಸುವುದಿಲ್ಲ ಎಂಬ ಭರವಸೆ ನೀಡಿದರೆ ಸಭೆಗಳಿಗೆ ಹಾಜರಾಗುತ್ತೇವೆ: ಕೇಜ್ರಿವಾಲ್ ಗೆ ದೆಹಲಿ ಮುಖ್ಯಕಾರ್ಯದರ್ಶಿ ಪತ್ರ
ಕೇಜ್ರಿವಾಲ್
ಕೇಜ್ರಿವಾಲ್
Updated on
ದೆಹಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಪತ್ರ ಬರೆದಿರುವ ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಲ್ಲೆ ನಡೆಸುವುದಿಲ್ಲ ಎಂದು ಭರವಸೆ ನೀಡಿದರೆ ಮಾತ್ರ ಬಜೆಟ್ ಗೆ ಸಂಬಂಧಿಸಿದ ಸಭೆಗೆ ಬರುವುದಾಗಿ ಹೇಳಿದ್ದಾರೆ. 
ಫೆ.28 ರ ಸಭೆ ದೆಹಲಿ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸಲು ಉದ್ದೇಶಿಸಲಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದ್ದು, ದೆಹಲಿ ಸರ್ಕಾರಿ ನೌಕರರು ಬಜೆಟ್ ಅಧಿವೇಶನಕ್ಕಾಗಿ ಹುರುಪಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಚರ್ಚಿಸಲು ನಡೆಸಲು ನಾನು ಮತ್ತು ನನ್ನ ಸಹೋದ್ಯೋಗಿಗಳು  ಸಭೆಗೆ ಬರುತ್ತಿದ್ದೇವೆ,  ಅಲ್ಲಿ ಹಲ್ಲೆ ನಡೆಸುವುದಿಲ್ಲ ಎಂಬ ವಿಶ್ವಾಸದಿಂದ ಸಭೆಗೆ ಬರುತ್ತಿದ್ದೇವೆ ಎಂದು ಮುಖ್ಯ ಕಾರ್ಯದರ್ಶಿ ಅನ್ಶು ಪ್ರಕಾಶ್ ಹೇಳಿದ್ದಾರೆ. 
ಫೆ.28 ರಂದು ನಡೆಯುವ ಸಭೆಯಲ್ಲಿ ಶಿಷ್ಟಾಚಾರ ಪಾಲನೆ ಮಾಡಲಾಗುತ್ತದೆ ಹಾಗೂ ಅಧಿಕಾರಿಗಳ ಗೌರವಕ್ಕೆ ಧಕ್ಕೆಯಾಗದಂತೆ ನಡೆದುಕೊಳ್ಳಲಾಗುತ್ತದೆ ಎಂಬ ಭರವಸೆ ನೀಡಿದರೆ ಮಾತ್ರ ಸಭೆಗೆ ಬರುತ್ತೇನೆ ಎಂದು ಮುಖ್ಯಕಾರ್ಯದರ್ಶಿಗಳು ಕೇಜ್ರಿವಾಲ್ ಗೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com