ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಮಾಜಿ ಕೇಂದ್ರ ಸಚಿವ ಚಿದಂಬರಂ ಅವರ ಪುತ್ರ ಕಾರ್ತಿ ಅವರನ್ನು ಸಿಬಿಐ ಬಂಧಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಂದೀಪ್ ಸುರ್ಜೆವಾಲಾ ಅವರು, ಕೇಂದ್ರ ಸರ್ಕಾರ ತನ್ನ ಭ್ರಷ್ಟಾಚಾರದ ಹಗರಣಗಳನ್ನು ಮತ್ತು ಕೆಟ್ಟ ಹಾಗೂ ದುರಾಡಳಿತವನ್ನು ಮುಚ್ಚಿಕೊಳ್ಳಲು ಮಾಡುತ್ತಿರುವ ತಂತ್ರ ಅಷ್ಟೆ ಎಂದಿದ್ದಾರೆ.