ಇಂತಹಾ ಒಂದು ದಾರುಣ ಘಟನೆ ಮಧ್ಯ ಪ್ರದೇಶದ ರತ್ನಂ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನಂದ್ಲೇತ ಗ್ರಾಮದ ಘನಶ್ಯಾಮ ಎನ್ನುವ ದಿನಗೂಲಿ ಕೆಲಸಗಾರನ ನಾಲ್ಕು ವರ್ಷದ ಮಗಳು ಜೀಜಾ ಜ್ವರದಿಂದ ಬಳಲುತ್ತಿದ್ದಳು. ಆಕೆಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕರೆದೊಯ್ದಾಗ ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ದೊಡ್ಡಾಸ್ಪತ್ರೆಗೆ ಕರೆದೊಯ್ಯಬೇಕಾಗುವುದು ಎಂದಿದ್ದಾರೆ. ಘನಶ್ಯಾಮ ಆಸ್ಪತ್ರೆಗೆ ಮಗಳನ್ನು ಸಾಗಿಸಲು ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿ ಎಂದು ಆರೋಗ್ಯ ಕೇಂದ್ರದ ಅಧಿಕಾರಿಗಳಿಗೆ ಮನವಿ ಮಾಡಿದ್ದು ಅದಕ್ಕೆ ಅಧಿಕಾರಿಗಳು ನಿರಾಕರಿಸಿದ್ದಾರೆ.