ಮಹಾರ್ ಸಮುದಾಯದ ಸೈನಿಕರು ಪೇಶ್ವೆಯ ಸೇನೆಯನ್ನು ಸೋಲಿಸಿದ ನೆನಪಿಗಾಗಿ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಪ್ರತಿ ವರ್ಷ ಆಚರಿಸಲಾಗುತ್ತಿದ್ದು, ಅದರಂತೆ ನಿನ್ನೆ ನಡೆದ ವಿಜಯೋತ್ಸವದ ವೇಳೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಇದರಿಂದ ಮಹಾರಾಷ್ಟ್ರದ ಅನೇಕ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಮುಂಬೈ, ಪುಣೆಯಲ್ಲಿ ಪ್ರತಿಭಟನೆಗಳ ಕಾವು ಹೆಚ್ಚಿದೆ.