ಕಳೆದ ವಾರ ಅಂದರೆ ಡಿಸೆಂಬರ್ 28ರ ಸುಮಾರಿಗೆ ಅರುಣಾಚಲ ಪ್ರದೇಶದ ಗಡಿ ಮೂಲಕ ಭಾರತದೊಳಗೆ ಪ್ರವೇಶಿಸಿದ ರಸ್ತೆ ನಿರ್ಮಾಣ ತಂಡವನ್ನು ಗ್ರಾಮಸ್ಥರು ಗುರುತಿಸಿದ್ದರು. ತಂಡದಲ್ಲಿ ನಾಗರಿಕರು ಮತ್ತು ಸಮವಸ್ತ್ರ ಧರಿಸಿದ್ದವರು ಕೂಡ ಇದ್ದರು. ಕೂಡಲೇ ಗ್ರಾಮಸ್ಥರು ಪೊಲೀಸರಿಗೆ ವಿಷಯ ಮುಟ್ಟಿಸಿದರು. ಪೊಲೀಸರು ಇಂಡೊ-ಟಿಬೆಟಿಯನ್ ಗಡಿ ಸಿಬ್ಬಂದಿಗೆ ವಿಷಯ ತಲುಪಿಸಿದಾಗ ಬಿಶಿಂಗ್ ಸಮೀಪ ಮೆಡೊಗ್ ಎಂಬಲ್ಲಿ ಭದ್ರತಾಪಡೆಯನ್ನು ನಿಯೋಜಿಸಿದರು. ಯರ್ಲಂಗ್ ಸುಂಗ್ಪೋ ನದಿ ಭಾರತೀಯರು ಸಿಯಾಂಗ್ ಎಂದು ಕರೆಯುವ ನದಿಯ ಉತ್ತರ ಭಾಗವನ್ನು ಚೀನಾಪಡೆ ಪ್ರವೇಶಿಸಿದೆ.
ಇಂಡೊ-ಟಿಬೆಟಿಯನ್ ಭದ್ರತಾ ಪಡೆ ಚೀನೀಯರಿಗೆ ಅಲ್ಲಿಂದ ಹೊರಟು ಹೋಗುವಂತೆ ಸೂಚಿಸಿದೆ. ಮಾತಿನ ಘರ್ಷಣೆ ಕೂಡ ನಡೆದಿದೆ. ಆದರೆ ಚೀನೀಯರು ಹಿಂತಿರುಗಲು ನಿರಾಕರಿಸಿದರು. ಇದಕ್ಕೆ ಭಾರತೀಯ ಸೇನೆ ಗಸ್ತುಪಡೆಯನ್ನು ಆ ಪ್ರದೇಶಕ್ಕೆ ಕಳುಹಿಸಿದ್ದು, ಇದೀಗ ಅಲ್ಲಿ ಭದ್ರತಾಪಡೆ ಠಿಕಾಣಿ ಹೂಡಿದೆ.
ಈ ಬಗ್ಗೆ ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಕಚೇರಿಯನ್ನು ವಿಚಾರಿಸಿದರೆ ಘಟನೆ ಬಗ್ಗೆ ಅಸಡ್ಡೆ ತೋರಿದರು. ಇನ್ನು ಸ್ಥಳೀಯ ಸಂಸದ ನಿನೊಂಗ್ ಎರಿಂಗ್ ಅವರಿಗೆ ಸೇನಾಪಡೆಯ ನಿಲುಗಡೆ ಬಗ್ಗೆ ಮಾಹಿತಿ ಇಲ್ಲ ಎಂದರು. ಗೆಲ್ಲಿಂಗ್ ಗ್ರಾಮ ದಾಟಿ ಜನರು ಹೋಗಲು ಸೇನಾಪಡೆ ಬಿಡುವುದಿಲ್ಲ. ಅಂತಾರಾಷ್ಟ್ರೀಯ ಗಿಡಿಭಾಗಕ್ಕೆ ಟ್ಯುಟಿಂಗ್ ಪಟ್ಟಣದ ನಂತರ ಗೆಲ್ಲಿಂಗ್ ಮುಂದಿನ ಆಡಳಿತಾತ್ಮಕ ವಲಯವಾಗಿದೆ ಎನ್ನುತ್ತಾರೆ ವಕೀಲ ಕಾರ್ಯಕರ್ತರು.
ಡೊಕ್ಲಾಮ್ ಜೊತೆ ಹೋಲಿಕೆ ಮಾಡುವುದು ಸುಲಭವಾದರೂ ಈ ವಿಚಾರದಲ್ಲಿ ಸರಿಯಲ್ಲ. ಡೊಕ್ಲಾಮ್ ವಿವಾದದಲ್ಲಿ ಭೂತಾನ್ ದೇಶ ಕೂಡ ಒಳಗೊಂಡಿತ್ತು. ಆದರೆ ಈ ವಿಷಯದಲ್ಲಿ ಮೆಕ್ ಮೊಹಲ್ ರೇಖೆಯಿಂದ 4 ಕಿಲೋ ಮೀಟರ್ ದೂರದಲ್ಲಿ ಭಾರತದ ಪ್ರಾಂತ್ಯದೊಳಗೆ ಭಾರತ ಮತ್ತು ಚೀನಾ ಸೇನಾಪಡೆ ನಿಲುಗಡೆಯಾಗಿದೆ ಎಂಬುದು ಕೆಲವರು ಅಭಿಪ್ರಾಯ.