ಕಾಶ್ಮೀರ: ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ, ಬಿಎಸ್ಎಫ್ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಬುಧವಾರ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಬುಧವಾರ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಬಿಎಸ್ಎಫ್ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹುತಾತ್ಮ ಯೋಧ ಗಡಿ ಭದ್ರತಾ ಪಡೆ(ಬಿಎಸ್ಎಫ್)ಯ 173ನೇ ಬಟಾಲಿಯನ್ ನ ಆರ್ ಪಿ ಹಂಜ್ರೆಯ್ ಎಂದು ಗುರುತಿಸಲಾಗಿದೆ.
ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸಹ ತಕ್ಕ ಪ್ರತ್ಯುತ್ತರ ನೀಡುತ್ತಿದ್ದು, ಸಾಂಬಾ ಮತ್ತು ಹಿರಾನಗರ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಭಾರಿ ಗುಂಡಿನ ಕಾಳಗ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com