ಲೋಕಸಭೆಯಲ್ಲಿ ಹಿಂಸಾಚಾರದ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ಭಾರತದಲ್ಲಿ ದಲಿತರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಮಹಾರಾ, ಮರಾಠರ ಮಧ್ಯೆ ವಿಷ ಬೀಜ ಬಿತ್ತಲಾಗುತ್ತಿದೆ. ಬಿಜೆಪಿ ಆಡಳಿತದಲ್ಲಿರುವ ಪ್ರದೇಶಗಳಲ್ಲೇ ಹೆಚ್ಚು ಹಿಂಸಾಚಾರಗಳು ನಡೆಯುತ್ತಿವೆ. ಭೀಮ್ ಕೋರೆಗಾಂವ್ ಹಿಂಸಾಚಾರಕ್ಕೆ ಮಹಾರಾಷ್ಟ್ರ ಸರ್ಕಾರವೇ ನೇರ ಹೊಣೆ. ಸುರ್ಪೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಬೇಕು. ಹಿಂಸಾಚಾರಕ್ಕೆ ಕಾರಣರಾದವನ್ನು ಹಿಡಿದು ಶಿಕ್ಷಿಸಬೇಕು ಎಂದು ಹೇಳಿದರು.