ಶಿವಸೇನಾ ಸಂಸದ ಸಂಜಯ್ ರಾವತ್ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿ, ಭೀಮಾ-ಕೋರೆಗಾಂವ್ ಹಿಂಸಾಚಾರಕ್ಕೆ 200 ವರ್ಷಗಳ ಇತಿಹಾಸವಿದೆ. ಆದರೆ ಇತಿಹಾಸದ ಹೆಸರಿನಲ್ಲಿ ಯಾವುದೇ ದಂಗೆ, ಗಲಭೆಗಳು ನಡೆದಿಲ್ಲ.ಆ ಯುದ್ಧ ನಡೆದ ಸಂದರ್ಭದಲ್ಲಿ ಎಲ್ಲಾ ಜಾತಿ ಮತ್ತು ಸಮುದಾಯಗಳು ಒಗ್ಗಟ್ಟಿನಿಂದ ತಮ್ಮ ಶತ್ರುಗಳ ವಿರುದ್ಧ ಹೋರಾಡಿದ್ದರು. ಆದರೆ ಇಂದು ಜಾತಿ, ಸಮುದಾಯಗಳ ಹೆಸರಿನಲ್ಲಿ ಪ್ರತಿಭಟನೆ, ಜಗಳ ಮಾಡಿ ಶೌರ್ಯ ದಿವಸವನ್ನು ಆಚರಿಸುತ್ತಿದ್ದಾರೆ. ಇದು ಖಂಡಿತಾ ತಪ್ಪು. ರಾಜಕೀಯ ಲಾಭ ಪಡೆಯಲು ಯಾರೋ ಪ್ರಯತ್ನಿಸುತ್ತಿದ್ದಾರೆ. ಅವರ ಮುಖವಾಡ ಖಂಡಿತವಾಗಿಯೂ ಬಯಲಾಗಲಿದೆ ಎಂದು ಹೇಳಿದರು.