ಜಿಗಿಶಾ ಘೊಷ್ ಅಪಹರಣ ಹಾಗೂ ಕೊಲೆ ಆರೋಪದಡಿ ರವಿ ಕಪೂರ್, ಅಮಿತ್ ಶುಕ್ಲಾ ಮತ್ತು ಬಲ್ಜೀತ್ ಸಿಂಗ್ ಮಲಿಕ್ ಆರೋಪಿಗಳಾಗಿದ್ದು ಈ ಹಿಂದೆ ವಿಶೇಷ ನ್ಯಾಯಾಲಯವು ರವಿ ಕಪೂರ್, ಅಮಿತ್ ಶುಕ್ಲಾ ಅವರುಗಳಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಮೂರನೇ ಅಪರಾಧಿ ಬಲ್ಜೀತ್ ಸಿಂಗ್ ನ ಸನ್ನಡತೆಯ ಕಾರಣ ಜೀವಾವಧಿ ಶಿಕ್ಷೆಗೆ ಗುರಿಮಾಡಲಾಗಿತ್ತು. ಇದೀಗ ದೆಹಲಿ ಹೈಕೋರ್ಟ್ ಮೊದಲೆರಡೂ ಆರೋಪಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿದೆ.