ಜಮ್ಮು-ಕಾಶ್ಮೀರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ: ಓಮರ್ ಅಬ್ದುಲ್ಲಾ

ಜಮ್ಮು-ಕಾಶ್ಮೀರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ ಎಂಬುದಕ್ಕೆ ರಾಜ್ಯಪಾಲರು ಸರ್ಕಾರದ ವಿರುದ್ಧ ಮಾಡುತ್ತಿರುವ ಟೀಕೆಯೇ ಉದಾಹರಣೆ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಹೇಳಿದ್ದಾರೆ.
ಓಮರ್ ಅಬ್ದುಲ್ಲಾ
ಓಮರ್ ಅಬ್ದುಲ್ಲಾ
Updated on
ಜಮ್ಮು: ಜಮ್ಮು-ಕಾಶ್ಮೀರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ ಎಂಬುದಕ್ಕೆ ರಾಜ್ಯಪಾಲರು ಸರ್ಕಾರದ ವಿರುದ್ಧ ಮಾಡುತ್ತಿರುವ ಟೀಕೆಯೇ ಉದಾಹರಣೆ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಹೇಳಿದ್ದಾರೆ. 
ರಾಜ್ಯಪಾಲರು ಜಮ್ಮು-ಕಾಶ್ಮೀರದಲ್ಲಿರುವ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವುದು ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ ಎಂಬುದನ್ನು ತಿಳಿಸುತ್ತದೆ ಎಂದು ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ. ಜಮ್ಮು-ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೊಹಮ್ಮದ್ ಸಯೀದ್ ಅವರ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ರಾಜ್ಯಪಾಲ ಎನ್ಎನ್ ವೋಹ್ರಾ ರಾಜ್ಯ ಸರ್ಕಾರ ಮತ್ತಷ್ಟು ಸುಧಾರಣೆ ಕಾಣಬೇಕಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಓಮರ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ. 
ಪಿಡಿಪಿ-ಬಿಜೆಪಿ ಸರ್ಕಾರ ಬಂದ ನಂತರ ರಾಜ್ಯದ ಸ್ಥಿತಿ ಹದಗೆಟ್ಟಿದೆ ಎಂದು ಓಮರ್ ಅಬ್ದುಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com