ಇದೇ ವರದಿಯನ್ನಾಧರಿಸಿ ಸುಪ್ರೀಂ ಕೋರ್ಟ್ ಇದೀಗ ತನ್ನ ತೀರ್ಮಾನ ಘೋಷಣೆ ಮಾಡಿದ್ದು, ಗಾಂಧಿ ಹತ್ಯೆ ಪ್ರಕರಣದ ಮರುತನಿಖೆಯ ಅಗತ್ಯವಿಲ್ಲ ಎಂದು ಹೇಳಿದೆ. ಈ ಹಿಂದೆ ಮುಂಬೈ ಮೂಲದ ಐಟಿ ಕನ್ಸಲ್ ಟೆಂಟ್ ಪಂಕಜ್ ಕುಮುಚಂದ್ರ ಫಡ್ನಿಸ್ ಹೈಕೋರ್ಟ್ ನಲ್ಲಿ ಮಹಾತ್ಮಗಾಂಧಿ ಹತ್ಯೆ ಪ್ರಕರಣದ ಮರು ತನಿಖೆ ನಡೆಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಗಾಂಧಿ ಹತ್ಯೆ ಹಿಂದೆ ಬ್ರಿಟೀಷ್ ಗುಪ್ತಚರ ಸಂಸ್ಥೆಯ ಕೈವಾಡವಿದ್ದು, ತನ್ನ ಫೋರ್ಸ್ 136 ಘಚಕದ ಮೂಲಕ ಷಡ್ಯಂತ್ರ ರಚಿಸಿ ಗಾಂಧಿ ಅವರನ್ನು ಹತ್ಯೆ ಮಾಡಿಸಿತ್ತು ಎಂದು ಆರೋಪಿಸಿದ್ದರು. ಆದರೆ ಫಡ್ನಿಸ್ ಅವರ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕಿತ್ತು.