ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಜಿಂದಾಲ್, ಕಲ್ಲಿದ್ದಲು ಇಲಾಖೆಯ ಮಾಜಿ ಕೇಂದ್ರ ರಾಜ್ಯ ಖಾತೆ ಸಚಿವ ದಾಸರಿ ನಾರಾಯಣ್ ರಾವ್, ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ, ಕಲ್ಲಿದ್ದಲು ಇಲಾಖೆಯ ಮಾಜಿ ಕಾರ್ಯದರ್ಶಿ ಹೆಚ್ ಸಿ ಗುಪ್ತಾ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್ ಸಂಚು, ವಂಚನೆ, ನಂಬಿಕೆ ಧ್ರೋಹದ ಆರೋಪ ಹೊರಿಸಬೇಕೆಂದು ಏಪ್ರಿಲ್ 2016ರಲ್ಲಿ ಸಿಬಿಐ ವಾದ ಮಂಡಿಸಿತ್ತು.