ಆಧಾರ್ ಮಾಹಿತಿ ಸೋರಿಕೆ ಸಂಬಂಧ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಯುಐಎಡಿಐ ಮಾಜಿ ಅಧ್ಯಕ್ಷ ನಂದನ್ ನಿಲೇಕಣಿ ಅವರು, ಆಧಾರ್ ದುರ್ಬಳಕೆಗಾಗಿ ದುರುದ್ದೇಶ ಪೂರಿತ ಪ್ರಚಾರ ಅಭಿಯಾನ ನಡೆಯುತ್ತಿದೆ ಎಂದು ಹೇಳಿದ್ದಾರೆ. ಆಧಾರ್ ಮಾಹಿತಿ ಸೋರಿಕೆ ಕುರಿತು ವರದಿ ಮಾಡಿದ್ದ ವರದಿಗಾರ್ತಿ ವಿರುದ್ಧ ಎಫ್ ಐಆರ್ ದಾಖಲಾಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ನಿಲೇಕಣಿ ಅವರು, ಆಧಾರ್ ಮಾಹಿತಿ ಸೋರಿಕೆ ಪ್ರಕರಣವನ್ನು ಕೂಲಂಕುಷವಾಗಿ ಅವಲೋಕಿಸಿದರೆ, ಇದು ಖಂಡಿತಾ ಶೇ.100ಕ್ಕೆ ನೂರರಷ್ಟು ದುರುದ್ದೇಶ ಪೂರಿತ ಪ್ರಚಾರ ಅಭಿಯಾನವಾಗಿದೆ ಎಂದೆನಿಸುತ್ತದೆ ಎಂದು ಹೇಳಿದ್ದಾರೆ.