ಬೆಂಗಳೂರಿನಿಂದ ತಿರುವಣ್ಣಮಲೈಗೆ ನಾವು ತಲಾ 150 ರುಪಾಯಿ ಕೊಟ್ಟು ಬಸ್ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದೆವು. ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಬಸ್ ನಿಂದ ನಮ್ಮನ್ನು ಕೆಳಗಿಳಿಸುವಾಗ ನಮ್ಮ ಹಣವನ್ನು ವಾಪಸ್ ಕೊಡುವಂತೆ ನಾನು ಕಂಡಕ್ಟರ್ ನಲ್ಲಿ ಗೋಗರೆದೆ. ಅದಕ್ಕೆ ಆತ ನಿರಾಕರಿಸಿದ. ಆದ್ದರಿಂದ ನಾನು ಇಲ್ಲಿ ಕುಳಿತು ಯಾವುದಾದರೂ ಆ್ಯಂಬುಲೆನ್ಸ್ ಬರುತ್ತದೆಯೇ ಎಂದು ಕಾದು ನೋಡುತ್ತಿದ್ದೇನೆ ಎಂದು ಮಾಧ್ಯಮದವರ ಮುಂದೆ ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.