ಬಿಜೆಪಿ ಸೇರಿದ ನಾಥ್ ಅವರ ಸದಸ್ಯತ್ವನ್ನು ಅನರ್ಹಗೊಳಿಸುವಂತೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬೀರಜಿತ್ ಸಿನ್ಹಾ ಅವರು ಸ್ಪೀಕರ್ ಗೆ ಪತ್ರ ಬರೆದಿದ್ದರು. ಈ ಸಂಬಂಧ ನಾನು ವಿಚಾರಣೆಗೆ ಹಾಜರಾಗುವಂತೆ ನಾಥ್ ಅವರಿಗೆ ಎರಡು ಬಾರಿ ನೋಟಿಸ್ ನೀಡಿದ್ದೆ. ಆದರೆ ಅನಾರೋಗ್ಯದ ನೆಪ ಹೇಳಿ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ.