ಪಾಟ್ನಾದ ಎಸ್ ಪಿ ಈ ಬಗ್ಗೆ ಮಾತನಾಡಿದ್ದು ಪ್ರಮೋದ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪ್ರಮೋದ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಅಂಗರಕ್ಷಕರ ಸಮೇತ ಉಡಾಯಿಸುವುದಾಗಿ ಬೆದರಿಕೆ ಹಾಕಿದ್ದ. ಈ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕ್ರಮ ಕೈಗೊಂಡಿದ್ದು, ಯುವಕನನ್ನು ಬಂಧಿಸಿದ್ದಾರೆ.