ಶುಕ್ರವಾರ ಸೇನಾ ದಿನಾಚರಣೆ ನಿಮಿತ್ತ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿನ ಶಿಕ್ಷಣ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆಯೇ ಆಗಬೇಕು ಎಂದು ಹೇಳಿದರು. ಶೈಕ್ಷಣಿಕ ವ್ಯವಸ್ಥೆಯ ಬದಲಾವಣೆಯಿಂದ ಮಾತ್ರ ಕಾಶ್ಮೀರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಸಾಧ್ಯ. ಕಾಶ್ಮೀರದಲ್ಲಿರುವ ಮೂಲಭೂತವಾದವನ್ನು ಬುಡಸಹಿತ ಕಿತ್ತೊಗೆಯಬೇಕಾದರೆ ಮೊದಲು ಅಲ್ಲಿನ ಶಿಕ್ಷಣ ವ್ಯವಸ್ಥೆ ಬದಲಾಗಬೇಕು. ಕಾಶ್ಮೀರದಲ್ಲಿ ಸಾಮಾಜಿಕ ಜಾಲತಾಣ, ಸರ್ಕಾರಿ ಶಾಲೆ, ಮದರಸಾ ಮತ್ತು ಮಸೀದಿಗಳ ದುರ್ಬಳಕೆಯಾಗುತ್ತಿದ್ದು, ಶಿಕ್ಷಣದ ಬದಲಿಗೆ ಮೂಲಭೂತವಾದವನ್ನು ವಿದ್ಯಾರ್ಥಿಗಳಿಗೆ ತುಂಬಲಾಗುತ್ತಿದೆ. ಹೀಗಾಗಿ ಮದರಸಾ ಮತ್ತು ಮಸೀದಿಗಳನ್ನು ಕೇಂದ್ರ ಸರ್ಕಾರ ನಿಯಂತ್ರಿಸಲೇಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.