ನಿನ್ನೆ ಸುಪ್ರೀಂ ಕೋರ್ಟ್ ನ ನಾಲ್ವರು ನ್ಯಾಯಾಧೀಶರು ಇದೇ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸುವ ಮೂಲಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದರು. ಈ ಬಗ್ಗೆ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಯಶವಂತ್ ಸಿನ್ಹಾ ಅವರು, ಸಂಸತ್ತು ರಾಜಿ ಮಾಡಿಕೊಂಡರೆ, ಸುಪ್ರೀಂ ಕೋರ್ಟ್ ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುವುದಿಲ್ಲ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ.