ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರ ಚೆನ್ನೈ ಮತ್ತು ದೆಹಲಿ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದು, ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ಕುಟುಂಬ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದೆ ಎಂಬ ಆರೋಪದ ಮೇರೆಗೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.