ನವದೆಹಲಿ: ಮಕರ ಸಂಕ್ರಾಂತಿ, ಪೊಂಗಲ್, ಉತ್ತರಾಯಣ ಹಬ್ಬದ ಸಂಭ್ರಮದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಮೋದಿ ಶುಭಾಶಯ ಹೇಳಿದ್ದು "ಮಕರ ಸಂಕ್ರಾಂತಿ ಸಂದರ್ಭದಲ್ಲಿ, ನಾನು ಎಲ್ಲಾ ಜನರಿಗೂ ನನ್ನ ಶುಭಾಶಯಗಳನ್ನು ಹೇಳುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
ಮಾಘ ಬಿಹು ಸಂದರ್ಭದಲ್ಲಿ ದೇಶದ ಜನರಿಗೆ ಶುಭ ಕೋರಿದ ಪ್ರಧಾನಿ "ಈ ಹಬ್ಬವು ಸಹೋದರತ್ವದ ಬಂಧವನ್ನು ಬಲಪಡಿಸುತ್ತದೆ ಮತ್ತು ನಮ್ಮ ಸಮಾಜವನ್ನು ಹೆಚ್ಚು ಸಂತೋಷ ಮತ್ತು ಸಮೃದ್ಧಗೊಳಿಸುತ್ತದೆ" ಎಂದು ಹೇಳಿದ್ದಾರೆ.
ಇಂದು ದೇಶದಾದ್ಯಂತ ಮಕರ ಸಂಕ್ರಾಂತಿ, ಉತ್ತರಾಯಣ ಪ್ರಾರಂಭದ ಹಬ್ಬವನ್ನು ಆಚರಿಸಲಾಗುತ್ತಿದ್ದು ದೇವಾಲಯಗಳಿಗೆ ತೆರಳಿ ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ಮನೆಯಲ್ಲಿ ಎಳ್ಳು-ಬೆಲ್ಲ, ಸಿಹಿ ತಿನಿಸು ಮಾಡಿ ಮನೆ ಮನೆಗೆ ಹಂಚುತ್ತಿದ್ದಾರೆ.