ಸುಪ್ರೀಂ ಕೋರ್ಟ್ ನ ನಾಲ್ವರು ನ್ಯಾಯಾಧೀಶರು, ಕೇಂದ್ರ ನ್ಯಾಯಾಲಯದಲ್ಲಿ ಕೆಲವು ಸಮಸ್ಯೆಗಳಿವೆ, ಕೇಸನ್ನು ನ್ಯಾಯಾಧೀಶರುಗಳಿಗೆ ವಹಿಸುವಲ್ಲಿ ಸಮಸ್ಯೆಗಳಾಗುತ್ತಿವೆ ಎಂದು ಕಳೆದ 12ರಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು. ಈ ವಿಷಯದಲ್ಲಿ ರಾಜಕೀಯ ಪಕ್ಷಗಳು ಮಧ್ಯಪ್ರವೇಶಿಸಿ ಅದರ ಲಾಭ ಪಡೆದುಕೊಳ್ಳಲು ಪ್ರಯತ್ನಿಸಬಾರದು ಎಂದು ಮನನ್ ಕುಮಾರ್ ಮನವಿ ಮಾಡಿದರು.