ಸೋಹ್ರಬುದ್ದೀನ್ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳ ಬಿಡುಗಡೆಯನ್ನು ಪ್ರಶ್ನಿಸುವುದಿಲ್ಲವೆಂದ ಸಿಬಿಐ

ಸೋಹ್ರಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಐಪಿಎಸ್ ಅಧಿಕಾರಿಗಳ ಬಿಡುಗಡೆಯನ್ನು ಪ್ರಶ್ನಿಸುವುದಿಲ್ಲ ಎಂದು ಸಿಬಿಐ ಬಾಂಬೆ ಹೈಕೋರ್ಟ್ ಗೆ ಹೇಳಿದೆ.
ಸಿಬಿಐ
ಸಿಬಿಐ
ಮುಂಬೈ: ಸೋಹ್ರಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಐಪಿಎಸ್ ಅಧಿಕಾರಿಗಳ ಬಿಡುಗಡೆಯನ್ನು ಪ್ರಶ್ನಿಸುವುದಿಲ್ಲ ಎಂದು ಸಿಬಿಐ ಬಾಂಬೆ ಹೈಕೋರ್ಟ್ ಗೆ ಹೇಳಿದೆ. 
ಸಿಬಿಐ ಪರ ವಕೀಲ ಸಂದೇಶ್ ಪಾಟೀಲ್ ಹಾಗೂ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್, ಬಾಂಬೆ ಹೈಕೋರ್ಟ್ ಗೆ ಹೇಳಿಕೆ ನೀಡಿದ್ದು, ಈಗಾಗಲೆ ಕಿರಿಯ ಅಧಿಕಾರಿಗಳನ್ನು ಬಿಡುಗಡೆ ಮಾಡಿರುವುದನ್ನು ಸಂಸ್ಥೆ ಪ್ರಶ್ನಿಸಿದೆ. ಆದರೆ ಐಪಿಎಸ್ ಅಧಿಕಾರಿಗಳ ಬಿಡುಗಡೆಯನ್ನು ಪ್ರಶ್ನಿಸುವುದಿಲ್ಲ ಎಂದು ಹೇಳಿದ್ದಾರೆ. 
ಗುಜರಾತ್ ಡಿಜಿ ವಂಝಾರ, ರಾಜಸ್ತಾನ ಐಪಿಎಸ್ ಅಧಿಕಾರಿ ದಿನೇಶ್ ಎಂಎನ್, ಗುಜರಾತ್ ಐಪಿಎಸ್ ಅಧಿಕಾರಿ ರಾಜ್ ಕುಮಾರ್ ಪಾಂಡಿಯನ್ ಸೇರಿದಂತೆ ಇನ್ನೂ ಹಲವು ಐಪಿಎಸ್ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದ್ದು, ಸಿಬಿಐ ಈ ಅಧಿಕಾರಿಗಳ ಬಿಡುಗಡೆಯನ್ನು ಪ್ರಶ್ನೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com