ನಿನ್ನೆ ಸಂಜೆ ನಾಪತ್ತೆಯಾಗಿದ್ದ ಪ್ರವೀಣ್ ತೊಗಾಡಿಯಾ ಅವರು ಇಂದು ಅಹ್ಮದಾಬಾದ್ ನ ಚಂದ್ರಮಣಿ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಬಗ್ಗೆ ಸುದ್ದಿ ಬೆನ್ನಲ್ಲೇ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಪ್ರವೀಣ್ ತೊಗಾಡಿಯಾ, ರಾಜಸ್ಥಾನ ಪೊಲೀಸರ ವಿರುದ್ಧ ಕೆಂಡಕಾರಿದ್ದಾರೆ. ಅನಾವಶ್ಯಕವಾಗಿ ರಾಜಸ್ತಾನ ಪೊಲೀಸರು ನನ್ನ ವಿರುದ್ಧ ಷಡ್ಯಂತ್ರ ರೂಪಿಸಿದ್ದು, ಬಂಧನದ ದೆಸೆಯಲ್ಲಿ ನನ್ನನ್ನು ಎನ್ ಕೌಂಟರ್ ಮಾಡಲು ಸಂಚು ರೂಪಿಸಿದ್ದಾರೆ ಎಂದು ನನ್ನ ಆಪ್ತವಲಯಗಳು ತಿಳಿಸಿವೆ. ರಾಜಸ್ಥಾನದಲ್ಲಿ ನನ್ನ ವಿರುದ್ಧ ಒಂದೇ ಒಂದು ವಾರಂಟ್ ಜಾರಿಯಾಗಿಲ್ಲ, ಹೀಗಿದ್ದೂ ಪೊಲೀಸರು ನಕಲಿ ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.