ಮಣಿಪುರ ನಕಲಿ ಎನ್ ಕೌಂಟರ್ ಪ್ರಕರಣದ ವಿಚಾರಣೆ: ಸಿಬಿಐ ಎಸ್ಐಟಿ ಬಗ್ಗೆ ಸುಪ್ರೀಂ ಅಸಮಾಧಾನ

ಮಣಿಪುರದಲ್ಲಿ ಸೇನೆ ನಡೆಸಿದೆ ಎನ್ನಲಾದ ನಕಲಿ ಎನ್ ಕೌಂಟರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ನ ವಿಶೇಷ ತನಿಖಾ ತಂಡದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on
ನವದೆಹಲಿ: ಮಣಿಪುರದಲ್ಲಿ ಸೇನೆ ನಡೆಸಿದೆ ಎನ್ನಲಾದ ನಕಲಿ ಎನ್ ಕೌಂಟರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ನ ವಿಶೇಷ ತನಿಖಾ ತಂಡದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 
ಕಳೆದ ವಿಚಾರಣೆ ವೇಳೆಯಲ್ಲಿ ಸೂಚನೆ ನೀಡಿದಷ್ಟು ಸಂಖ್ಯೆಯಲ್ಲಿ ಎಫ್ಐಆರ್ ಗಳನ್ನು ದಾಖಲಿಸದೇ ಇದ್ದ ಹಿನ್ನೆಲೆಯಲ್ಲಿ ಕೋರ್ಟ್ ಎಸ್ಐಟಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಕಳೆದ ವಿಚಾರಣೆ ವೇಳೆ ಜ.31 ರ ಒಳಗಾಗಿ 30 ಎಫ್ಐಆರ್ ಗಳನ್ನು ದಾಖಲಿಸುವಂತೆ ಕೋರ್ಟ್ ಸೂಚನೆ ನೀಡಿತ್ತು. ಆದರೆ ಎಸ್ಐಟಿ ಈ ವರೆಗೂ ಕೇವಲ 12 ಎಫ್ ಐಆರ್ ಗಳನ್ನು ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾ.ಮದನ್ ಬಿ.ಲೋಕುರ್ ಹಾಗೂ ಯುಯು ಲಲಿತ್ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಕರಣದ ತನಿಖೆಯನ್ನು ಈ ವರ್ಷದ ಫೆ.28 ಒಳಗೆ ಮುಕ್ತಾಯಗೊಳಿಸಿ ಅಂತಿಮ ವರದಿ ನೀಡಬೇಕೆಂದು ಸೂಚನೆ ನೀಡಿದ್ದಾರೆ. 
ಕಳೆದ ವರ್ಷ ಜುಲೈ 14 ರಂದು ಕೋರ್ಟ್ 30 ಎಫ್ಐಆರ್ ಗಳನ್ನು ದಾಖಲಿಸುವಂತೆ ಸೂಚಿಸಿತ್ತು. ಅಂದಿನಿಂದ ಇಂದಿನವರೆಗಿನ ಸ್ಥಿತಿ-ಗತಿ ವರದಿಗಳನ್ನೂ ಸಲ್ಲಿಕೆ ಮಾಡುವಂತೆ ಕೋರ್ಟ್ ಸೂಚನೆ ನೀಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com