ಮಾಜಿ ಪ್ರಧಾನಿ, ರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳಿಗೆ ಸರ್ಕಾರ ಬಂಗಲೆ ನೀಡುವ ಕುರಿತು ಹಿರಿಯ ವಕೀಲ ಗೋಪಾಲ್ ಸುಬ್ರಮಣ್ಯಂ ಅವರು ನೀಡಿದ ಸಲಹೆಗಳನ್ನು ಪರಿಗಣಿಸಿದ ನ್ಯಾಯಮೂರ್ತಿಗಳಾದ ರಂಜನ್ ಗೊಗೊಯಿ ಮತ್ತು ಆರ್ ಬಾನುಮತಿ ಅವರನ್ನೊಳಗೊಂಡ ಸುಪ್ರೀಂ ಪೀಠ, ಈ ವಿಚಾರವನ್ನು ಕೇಂದ್ರ ಸರ್ಕಾರದ ಮತ್ತು ರಾಜ್ಯ ಸರ್ಕಾರಗಳ ಕಾನೂನು ಅಧಿಕಾರಿಗಲಿಗೆ ಬಿಡುವುದಾಗಿ ಹೇಳಿ ವಿಚಾರಣೆಯನ್ನು ಮಾರ್ಚ್ 13ಕ್ಕೆ ಮುಂದೂಡಿದೆ.